ಗಿರೀಶ್ ರಘುನಾಥ್ ಕಾರ್ನಾಡ್ (ಹುಟ್ಟು - ಮೇ ೧೯, ೧೯೩೮) ಕನ್ನಡಕ್ಕೆ ಏಳನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡ ಸಾಹಿತ್ಯದ ನಾಟಕ ಕ್ಷೇತ್ರಕ್ಕೆ ಸಾಹಿತಿ. ಭಾರತದಲ್ಲೇ ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದವರಲ್ಲಿ ಕಾರ್ನಾಡ್ ಮೊದಲಿಗರು. ಹೀಗಾಗಿ ಕಾರ್ನಾಡ್ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯ ತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು. ಕನ್ನಡದಲ್ಲಿ ನಾಟಕ ರಚಿಸುತ್ತ, ಇತರ ಭಾರತೀಯ
ಭಾಷೆಗಳಲ್ಲಿ ಸಂಪರ್ಕವಿಟ್ಟುಕೊಂಡು ಸಾಂಸ್ಕೃತಿಕ ವಕ್ತಾರರಾದ ಕಾರ್ನಾಡ್ ನಟರಾಗಿ,
ನಿರ್ದೇಶಕರಾಗಿ ಹೆಸರಾಗಿದ್ದಾರೆ. ಆರಂಭದಲ್ಲಿ ರಂಗಭೂಮಿ ನಟರಾಗಿದ್ದವರು ಹೊಸ
ವಿಚಾರಗಳತ್ತ ಗಮನ ಹರಿಸಿ ನಾಟಕ ರಚನೆಗೆ ಚಿಂತಿಸಿದರು. ಹೀಗಾಗಿ ಪುರಾಣ, ಇತಿಹಾಸಗಳು
ವಾಸ್ತವ ನೆಲೆಗಟ್ಟಿನಲ್ಲಿ ನೇಯಲ್ಪಟ್ಟವು. READ MORE... ARTICLE BY : PRATHIBHA NANDAKUMAR Poet, writer, playwright and documentary filmmaker SOURCE: BANGALORE MIRROR dated 28.05.2011 |

