KANNADA ICONS‎ > ‎

KUVEMPU

ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.


ಜೀವನ

ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು.ಇವರು ಮೈಸೂರಿನ ಒಂಟಿಕೊಪ್ಪಲುವಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).

ರಾಷ್ಟ್ರಕವಿ ಡಾ.ಕು.ವೆಂ.ಪು ಅವರ ಕುರಿತ ಮತ್ತೊಂದು ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ http://kannadaratna.com/achievers/kuvempu.html

SEARCH KUVEMPU VIDEOS HERE


FOR MORE READING : VISIT NOW




ARTICLE BY : PRATHIBHA NANDAKUMAR Poet, writer, playwright and documentary filmmaker

SOURCE: BANGALORE MIRROR dated 28.05.2011