ವಂದೇ ಶಂಭು ಉಮಾಪತಿಂ ಸುರಗುರುಂ
ವಂದೇ ಜಗತ್ ಕಾರಣಂ
ವಂದೇ ಪನ್ನಗ ಭೂಷಣಂ ಮೃಗಧರಂ
ವಂದೇ ಪಶುನಾಂ ಪತಿಂ
ವಂದೇ ಸೂರ್ಯ ಶಶಾಂಕ ವಹ್ನಿ ನಯನಂ
ವಂದೇ ಮುಕುಂದಪ್ರಿಯಂ
ವಂದೇ ಭಕ್ತ ಜನಾಶ್ರಯಂಚ ವರದಂ
ವಂದೇ ಶಿವಂ ಶಂಕರಂ ||
ನ್ಯಾಯ ನೀತಿ ಮೂರ್ತಿವೆತ್ತ ಸತ್ಯ ಧೈವವೇ |
ಮಹಾಮಹಿಮ ಮಂಜುನಾಥ ನಮೋ ಎನ್ನುವೆ ||
ಭೂಮಿಗಿಳಿದ ಕೈಲಾಸ ನಿನ್ನ ಸನ್ನಿಧಿ |
ನೇತ್ರಾವತಿ ನದಿಯಿದುವೆ ಆ ಸುರನದಿ ||
||ಪ||
ಧರ್ಮಪಾಲ ದಯಾಶೀಲ ಮಂಜುನಾಥನೆ |
ನಿನ್ನ ಚರಣ ಸೇವೆ ನಮ್ಮ ಗುರಿಯ ಸಾಧನೆ ||
ಕಾಳರಾತ್ರಿ ಕಾಳರಾಹು ಕುಮಾರಸ್ವಾಮಿಗೆ |
ನೇಮದಿಂದ ನಮಿಸುವೆವು ಹೆಜ್ಜೆಹೆಜ್ಜೆಗೆ ||
||ನ್ಯಾಯ ನೀತಿ ಮೂರ್ತಿವೆತ್ತ||
ಅಣ್ಣಪ್ಪ ಗುರುವೆ ನಿನಗೆ ಶರಣು ಎನ್ನುವೆ |
ನಿನ್ನ ರಕ್ಷೆ ಇರಲು ನಾನು ಎಲ್ಲ ಗೆಲ್ಲುವೆ ||
ನ್ಯಾಯ ಮಾರ್ಗದಲ್ಲಿ ನಡೆದು ಧನ್ಯನಾಗುವೆ |
ಧರ್ಮ ನನ್ನ ಕಾಯಲೆಂದು ಸದಾ ಬೇಡುವೆ ||
||ನ್ಯಾಯ ನೀತಿ ಮೂರ್ತಿವೆತ್ತ||
ಧರ್ಮವನ್ನು ರಕ್ಷಿಸುವ ಶಕ್ತಿ ನೀಡು |
ನಿನ್ನ ನಂಬಿ ಬಾಳುವ ಭಕ್ತಿ ನೀಡು ||
ಸತ್ಯವೆ ಗೆಲ್ಲುವ ನ್ಯಾಯ ನೀಡು |
ನಮ್ಮ ಮನದ ಗುಡಿಯಲ್ಲಿ ವಾಸ ಮಾಡು ||
||ನ್ಯಾಯ ನೀತಿ ಮೂರ್ತಿವೆತ್ತ||